Close Menu
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
What's Hot

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026
Facebook X (Twitter) Instagram
Facebook X (Twitter) Instagram
ಜಗಲಿ ಕಟ್ಟೆ
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
ಜಗಲಿ ಕಟ್ಟೆ
Home»ಸಿನಿಮಾ»ಗೀತಪ್ರಿಯ ಅಭಿನಯದ ‘ಅಪರಿಚಿತೆ’ ಚಿತ್ರದ ಟ್ರೇಲರ್ ಬಿಡುಗಡೆ
ಸಿನಿಮಾ

ಗೀತಪ್ರಿಯ ಅಭಿನಯದ ‘ಅಪರಿಚಿತೆ’ ಚಿತ್ರದ ಟ್ರೇಲರ್ ಬಿಡುಗಡೆ

Jagali KatteBy Jagali KatteNovember 25, 20251 Comment2 Mins Read
WhatsApp Facebook Twitter LinkedIn Email Copy Link
Share
Facebook Twitter LinkedIn Pinterest Email

ಈ ಮೊದಲು ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ, ಮಾಜಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ‌.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಟಿ ತಾರಾ “ಅಪರಿಚಿತೆ” ಹಾಡೊಂದನ್ನು ಬಿಡುಗಡೆ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಗೀತಪ್ರಿಯ ಅವರು ಒಂದೊಳ್ಳೆ ಉದ್ದೇಶವಿಟ್ಟುಕೊಂಡು ಈ ಸಿನಿಮಾ‌ ಮಾಡಿದ್ದಾರೆ. ನಾವು ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ಕೊಡಬೇಕಾದರೆ, ಅದನ್ನು ಸುಲಭವಾಗಿ ತಲುಪಿಸುವ ಮಾರ್ಗ ಸಿನಿಮಾ. ಅಂತಹ ಸಿನಿಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿರುವ ಗೀತಪ್ರಿಯ ಸುರೇಶ್ ಕುಮಾರ್ ಮತ್ತು ತಂಡಕ್ಕೆ ಶುಭವಾಗಲಿ ಎಂದು ಸದಾನಂದ ಗೌಡ ಅವರು ಹಾರೈಸಿದರು. ಡಾಟಿ ಸದಾನಂದ ಗೌಡ ಹಾಗೂ ತಾರಾ ಅನುರಾಧ ಸಹ ಚಿತ್ರತಂಡಕ್ಕೆ ಶುಭ ಕೋರಿದರು.

1985ರಲ್ಲಿ ನಾನು ಹಾಗೂ ನನ್ನ ಪತಿ ಸೇರಿ ಶಿಕ್ಷಣ ಸಂಸ್ಥೆ ಆರಂಭಿಸಿದ್ದೆವು. ಹತ್ತು ಜನರಿಂದ ಆರಂಭವಾದ ಈ ಸಂಸ್ಥೆಯಲ್ಲಿ ಈಗ ಹತ್ತು ಸಾವಿರ ಜನ ವ್ಯಾಸಂಗ ಮಾಡುತ್ತಿದ್ದಾರೆ‌. ಈ ಹಿಂದೆ “ತಾಯವ್ವ” ಎಂಬ ಚಿತ್ರದಲ್ಲಿ ನಟಿಸಿದ್ದೆ. ಈಗ “ಅಪರಿಚಿತೆ” ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನನ್ನ ಪತಿ ಸುರೇಶ್ ಕುಮಾರ್ ಅವರೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ‌. ನಾನು ಜವಾಬ್ದಾರಿಯುತ ಶಿಕ್ಷಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕ ವಿಶ್ವನಾಥ್ ಕಥೆ ಹೇಳಿದರು. ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ನೀಡುವ ಕಥೆ ಇದ್ದರೆ ಮಾತ್ರ ನಟನೆ ಮಾಡುವುದಾಗಿ ಹೇಳಿದ್ದೆ. ಇದು ಅಂತಹುದ ಕಥೆ. ರಾಮನಗರದಲ್ಲಿ ಚಿತ್ರೀಕರಣ ನಡೆದಿದೆ. ಕ್ರಿಸ್ ಮಸ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು ನಟಿ ಗೀತಪ್ರಿಯ‌‌.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ವಿಶ್ವನಾಥ್, ‘ಇದು ನೈಜ ಕಥೆ ಆಧಾರಿತ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಚಿತ್ರ ಸೆನ್ಸರ್ ಅಂಗಳದಲ್ಲಿದೆ. ಗೀತಪ್ರಿಯ, ಸಿಂಧೂ ಲೋಕನಾಥ್, ಆರ್.ಜೆ. ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ್ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ ಎಂದರು.

ವೇದಿಕೆಯಲ್ಲಿ ಹಿರಿಯ ನಟ ಶ್ರೀನಾಥ್ ಮಾತನಾಡುತ್ತಾ, ‘ಒಂದೊಳ್ಳೆ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ‌‌. ನಾನು ಹಾಗೂ ನನ್ನ ಮಗ ರೋಹಿತ್ ಇಬ್ಬರು ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ ಎಂದರು.
.
ಮೂವತ್ತೈದು ವರ್ಷಗಳ ನಂತರ ನಾನು ಸಿನಿಮಾದಲ್ಲಿ ನಟಿಸಿದ್ದೇನೆ. ಅದರಲ್ಲೂ ನಮ್ಮ ಅಪ್ಪನ ಜೊತೆಗೆ‌. ಬಹಳ ಖುಷಿಯಾಗಿದೆ ಎಂದು ರೋಹಿತ್ ಶ್ರೀನಾಥ್ ತಿಳಿಸಿದರು.

Aparichite Geetha priya Kannada movie Sandalwood ಕನ್ನಡ ಸಿನಿಮಾ ಸುದ್ದಿ ಗೀತಪ್ರಿಯಾ ಸ್ಯಾಂಡಲ್ ವುಡ್
Share. Facebook Twitter Pinterest LinkedIn Tumblr Email
Jagali Katte
  • Website

Related Posts

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026

‘ಕರಾವಳಿ’ಯಿಂದ ಬಂತು ಫಸ್ಟ್ ರೊಮ್ಯಾಂಟಿಕ್ ಮುದ್ದು ಗುಮ್ಮ

January 23, 2026
View 1 Comment

1 Comment

  1. Pingback: ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʻನಾಯಿ ಇದೆ ಎಚ್ಚರಿಕೆʼ ಚಿತ್ರ ನವೆಂಬರ್ 28ಕ್ಕೆ ತೆರೆಗೆ – Jagalikatte

Leave A Reply Cancel Reply

Editors Picks
Latest Posts

Subscribe to Updates

Get the latest sports news from SportsSite about soccer, football and tennis.

© 2026 Jagali Katte. Designed by Karnataka Best Digital Services.
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ

Type above and press Enter to search. Press Esc to cancel.